Friday, March 6, 2026
HomeBusinessಕರ್ನಾಟಕದ 12 ಕಡೆ ಹೊಸ ಪೊಲೀಸ್‌ ಠಾಣೆ ನಿರ್ಮಾಣ,ಕರ್ನಾಟಕ ಬಜೆಟ್ 2026: ರಾಜ್ಯದ 11 ಜಿಲ್ಲೆಗಳಲ್ಲಿ...

ಕರ್ನಾಟಕದ 12 ಕಡೆ ಹೊಸ ಪೊಲೀಸ್‌ ಠಾಣೆ ನಿರ್ಮಾಣ,ಕರ್ನಾಟಕ ಬಜೆಟ್ 2026: ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ ಆರಂಭ: ಸಿಎಂ ಸಿದ್ದರಾಮಯ್ಯ ಘೋಷಣೆ – karnataka price range 2026 12 new police stations to be opened in 11 districts of the state cm siddaramaiah broadcasts

ಕರ್ನಾಟಕದ 11 ಜಿಲ್ಲೆಗಳಲ್ಲಿ ಹೊಸದಾಗಿ ಪೊಲೀಸ್‌ ಠಾಣೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ 2 ಕಡೆ ಹೊಸ ಠಾಣೆ ಬರಲಿದ್ದು, ಉಳಿದಂತೆ ದಾವಣಗೆರೆ ಕೋಲಾರ ಸೇರಿ 11 ಜಿಲ್ಲೆಯ ವಿವಿಧೆಡೆ ಹೊಸ ಠಾಣೆ ತಲೆ ಎತ್ತಲಿವೆ. ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಹೈಲೈಟ್ಸ್‌:

  • ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ ಆರಂಭ.
  • ಕರ್ನಾಟಕ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವ ಘೋಷಣೆ.
  • ದಕ್ಷಿಣ ಕರ್ನಾಟಕದಲ್ಲಿ 2 ಕಡೆ, ಉಳಿದಂತೆ ದಾವಣಗೆರೆ, ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ತಲೆ ಎತ್ತಲಿವೆ ಠಾಣೆಗಳು.
cm siddaramaiah karnataka budget 202
ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಮಹತ್ವದ ಘೋಷಣೆ.(ಗ್ಯಾಲರಿ– Agencies)
ಬೆಂಗಳೂರು: ಕರ್ನಾಟಕ ಬಜೆಟ್‌ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಕಾನೂನು ಸುವ್ಯವಸ್ಥೆಗೆ ಮುಂದಾಗಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹೊಸ ಪೊಲೀಸ್‌ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್‌ ಠಾಣೆಗಳು ನಿರ್ಮಾಣವಾಗಲಿವೆ.

ಕ್ರ.ಸಂ.ಜಿಲ್ಲೆಪೊಲೀಸ್ ಠಾಣೆ
1ದಕ್ಷಿಣ ಕನ್ನಡಮಾಣಿ ಪೊಲೀಸ್ ಠಾಣೆ
2ದಕ್ಷಿಣ ಕನ್ನಡಸಜಿಪನಡು ಪೊಲೀಸ್ ಠಾಣೆ
3ಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ
4ಬೆಳಗಾವಿಯರಗಟ್ಟಿ ಪೊಲೀಸ್ ಠಾಣೆ
5ಯಾದಗಿರಿಕಕ್ಕೇರಾ ಪೊಲೀಸ್ ಠಾಣೆ
6ಚಿತ್ರದುರ್ಗಹಿರಿಯೂರು ಸಂಚಾರ ಪೊಲೀಸ್ ಠಾಣೆ
7ದಾವಣಗೆರೆಆನಗೋಡು ಪೊಲೀಸ್ ಠಾಣೆ
8ಹಾವೇರಿತಿಳುವಳ್ಳಿ ಪೊಲೀಸ್ ಠಾಣೆ
9ಮೈಸೂರುಉದಯಗಿರಿ ದಕ್ಷಿಣ ಪೊಲೀಸ್ ಠಾಣೆ
10ವಿಜಯಪುರಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
11ಕೋಲಾರನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ
12ಚಾಮರಾಜನಗರಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ

ಬಜೆಟ್‌ 2026 ರಲ್ಲಿ ಗೃಹ ಹಾಗೂ ಒಳ ಆಡಳಿತ ಇಲಾಖೆಗೆ ಸಿಕ್ಕಿದ್ದೇನು?

  • ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8,000 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ.
  • ಸಿಬ್ಬಂದಿಗಳ ವಸತಿಗಾಗಿ ಪ್ರಸಕ್ತ ಸಾಲಿನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾಮಗಾರಿ ಆರಂಭ. ಸುವರ್ಣ ಸೌಧದ ಬಂದೋಬಸ್ತ್ ಸಿಬ್ಬಂದಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ 1,000 ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಶಾಶ್ವತ ಬ್ಯಾರಕ್‌ಗಳ ನಿರ್ಮಾಣ.
  • ಸಂಚಾರ ದಟ್ಟಣೆ ನಿಯಂತ್ರಿಸಲು 25 ಕೋಟಿ ರೂ. ವೆಚ್ಚದಲ್ಲಿ ‘ಸಂಯೋಜಿತ ಡಿಜಿಟಲ್ ವೇದಿಕೆ’ಯನ್ನು ರೂಪಿಸಲಾಗುತ್ತದೆ.
  • ನಗರ ಪೊಲೀಸಿಂಗ್ ಸವಾಲುಗಳನ್ನು ಎದುರಿಸಲು ಬೆಂಗಳೂರಿನಲ್ಲಿ ಈ ನಾವೀನ್ಯತೆ ಕೇಂದ್ರವನ್ನು ಸ್ಥಾಪನೆ.
  • ಪೊಲೀಸ್ ಆಧುನೀಕರಣ ಯೋಜನೆಯಡಿ ಸಿಸಿಟಿವಿ, ಬಾಡಿ ವರ್ನ್ ಕ್ಯಾಮೆರಾ, ಡ್ರೋನ್ ಮುಂತಾದವುಗಳಿಗಾಗಿ ಒಟ್ಟು 354 ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗಿದೆ.
  • ಗೃಹ ಇಲಾಖೆಯ ಚಲನಶೀಲತೆ ಹೆಚ್ಚಿಸಲು 75 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳನ್ನು ಒದಗಿಸಲಾಗಿದೆ.
 ಜಯಪ್ರಕಾಶ್‌ ಬಿರಾದಾರ್‌

ಲೇಖಕರ ಬಗ್ಗೆ ಜಯಪ್ರಕಾಶ್‌ ಬಿರಾದಾರ್‌ಜಯಪ್ರಕಾಶ್‌ ಬಿರಾದಾರ್ ಅವರು ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆ, ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ರೈಲ್ವೆ, ಆರೋಗ್ಯ, ಅರಣ್ಯ, ಸಾರಿಗೆ, ಬಿಬಿಎಂಪಿ, ಬಿಡಿಎ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.… ಇನ್ನಷ್ಟು ಓದಿ